25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ (ದಿನೇಶ್) ನಾಯ್ಕ, ಪತ್ನಿ ವಾರಿಜ, ಪುತ್ರ ಅಪಾಯದಿಂದ ಪಾರಾಗಿದ್ದಾರೆ.


ಈ ಸಂದರ್ಭ ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ವಿಷಯ ತಿಳಿದು ತಕ್ಷಣ ಧಾವಿಸಿದ ಬಿಜೆಪಿ ಬೂತ್ ಸಮಿತಿ 174ರ ಅಧ್ಯಕ್ಷ ಹರೀಶ ವಳಗುಡ್ಡೆ, ಸದಸ್ಯರು ಮತ್ತು ಕಾರ್ಯಕರ್ತರು ಮುರಿದು ಬಿದ್ದ ಮನೆಯ ಸಾಮಾನುಗಳನ್ನು ವಿಲೇವಾರಿ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸಿದರು.


ಬಡವರಾದ ರಾಮಣ್ಣ (ದಿನೇಶ) ನಾಯ್ಕರವರಿಗೆ ಒಂದು ತಾತ್ಕಾಲಿಕ ಮನೆಯನ್ನು ಒಂದು ವಾರದೊಳಗೆ ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ ವಳಗುಡ್ಡೆಯವರು, ಕಾರ್ಯಕರ್ತರು, ಗ್ರಾಮಸ್ಥರು, ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ.
ಸದ್ಯದ ಮಟ್ಟಿಗೆ ರಾಮಣ್ಣ ನಾಯ್ಕರ ಕುಟುಂಬದವರು ಸಂಬಂಧಿಕರಾದ ದಯಾನಂದ ನಾಯ್ಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ.

Related posts

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya
error: Content is protected !!