32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಗಮನಕ್ಕೆ ಗ್ರಾಮ ಪಂಚಾಯತ್ ಮೂಲಕ ತಿಳಿಸಿದ್ದು ಅದರಂತೆ ಜು.3 ರಂದು ಅರಣ್ಯ ಇಲಾಖೆಯ ಫಾರೆಸ್ಟ್ ರವಿಚಂದ್ರ ಮತ್ತು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ವಿಭಾಗದ ರಾಕೇಶ್ ಮತ್ತು ನೆರಿಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಯಂ ಬಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಬಿ ಅಶ್ರಫ್ ನೆರಿಯಾ, ಸದಸ್ಯರಾದ ರಮೇಶ್ ಕೆ.ಎಸ್. ಪಂಚಾಯತ್ ಸಿಬಂದಿಗಳಾದ ಮದುಮಲಾ ಸ್ಥಳಕ್ಕೆ ಭೇಟಿ ನೀಡಿದ್ದು ತುರ್ತು ಅಪಾಯದಲ್ಲಿರುವ ಮರವನ್ನು ತೆರವುಗೊಳಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಬಾಲಕೃಷ್ಣ ಗೌಡ, ಸಂಜೀವ ಗೌಡ, ಸೋಮಪ್ಪ ಗೌಡ, ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya
error: Content is protected !!