September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಗಮನಕ್ಕೆ ಗ್ರಾಮ ಪಂಚಾಯತ್ ಮೂಲಕ ತಿಳಿಸಿದ್ದು ಅದರಂತೆ ಜು.3 ರಂದು ಅರಣ್ಯ ಇಲಾಖೆಯ ಫಾರೆಸ್ಟ್ ರವಿಚಂದ್ರ ಮತ್ತು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ವಿಭಾಗದ ರಾಕೇಶ್ ಮತ್ತು ನೆರಿಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಯಂ ಬಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಬಿ ಅಶ್ರಫ್ ನೆರಿಯಾ, ಸದಸ್ಯರಾದ ರಮೇಶ್ ಕೆ.ಎಸ್. ಪಂಚಾಯತ್ ಸಿಬಂದಿಗಳಾದ ಮದುಮಲಾ ಸ್ಥಳಕ್ಕೆ ಭೇಟಿ ನೀಡಿದ್ದು ತುರ್ತು ಅಪಾಯದಲ್ಲಿರುವ ಮರವನ್ನು ತೆರವುಗೊಳಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಬಾಲಕೃಷ್ಣ ಗೌಡ, ಸಂಜೀವ ಗೌಡ, ಸೋಮಪ್ಪ ಗೌಡ, ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಮತ್ತು ಮಹಿಳಾ ಸಂಘದಿಂದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya
error: Content is protected !!