23.1 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!