July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!