30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವೇಣೂರು ಪೊಲೀಸ್ ಠಾಣೆ ಇದರ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಆಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಫೋಕ್ಸೋ ಕಾಯ್ದೆಯಡಿ ಮಕ್ಕಳಿಗೆ ಅರಿವು ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀರಾಜು ಪೂಜಾರಿ ವಹಿಸಿಕೊಂಡಿದ್ದರು. ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಣೆ ಇದರ ಬಗ್ಗೆ ವೇಣೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಮುರಗೋಡು ಇವರು ಮಾಹಿತಿ ನೀಡಿದರು. ಪೋಕ್ಸೋ ಕಾಯ್ದೆಯಡಿ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ಸಂರಕ್ಷಣೆಯ ಬಗ್ಗೆ ಆರಕ್ಷಕರಾದ ಶ್ರೀಮತಿ ಕೇಶವತಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆರಕ್ಷಕ ಸಿಬ್ಬಂದಿಗಳಾದ ಆನಂದ, ರಾಜೇಶ್, ಸತ್ಯಪ್ರಕಾಶ್, ಶಾಲಾ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ನಾರಾಯಣ ಪೂಜಾರಿ, ಮುಖ್ಯೋಪಾದ್ಯಾಯರಾದ ರಮೇಶ್ ಎಸ್ ಮಾಳಗೊಂಡ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸತೀಶ್ ಕುಮಾರ್ ಎನ್ ಸ್ವಾಗತಿಸಿ ನಿರೂಪಿಸಿದರು.

Related posts

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya
error: Content is protected !!