July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವೇಣೂರು ಪೊಲೀಸ್ ಠಾಣೆ ಇದರ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಆಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಫೋಕ್ಸೋ ಕಾಯ್ದೆಯಡಿ ಮಕ್ಕಳಿಗೆ ಅರಿವು ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀರಾಜು ಪೂಜಾರಿ ವಹಿಸಿಕೊಂಡಿದ್ದರು. ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಣೆ ಇದರ ಬಗ್ಗೆ ವೇಣೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಮುರಗೋಡು ಇವರು ಮಾಹಿತಿ ನೀಡಿದರು. ಪೋಕ್ಸೋ ಕಾಯ್ದೆಯಡಿ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ಸಂರಕ್ಷಣೆಯ ಬಗ್ಗೆ ಆರಕ್ಷಕರಾದ ಶ್ರೀಮತಿ ಕೇಶವತಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆರಕ್ಷಕ ಸಿಬ್ಬಂದಿಗಳಾದ ಆನಂದ, ರಾಜೇಶ್, ಸತ್ಯಪ್ರಕಾಶ್, ಶಾಲಾ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ನಾರಾಯಣ ಪೂಜಾರಿ, ಮುಖ್ಯೋಪಾದ್ಯಾಯರಾದ ರಮೇಶ್ ಎಸ್ ಮಾಳಗೊಂಡ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸತೀಶ್ ಕುಮಾರ್ ಎನ್ ಸ್ವಾಗತಿಸಿ ನಿರೂಪಿಸಿದರು.

Related posts

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya
error: Content is protected !!