ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ವತಿಯಿಂದ ಜುಲೈ 02 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷರಾದ ಮಂಜುಳ ರಾವ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಖೀತ ಶೆಟ್ಟಿ ಮತ್ತು ಸಂಧ್ಯಾ ವೆಂಕಟೇಶ್ ಉಪಾಧ್ಯಕ್ಷರಾದ ಬಬಿತ ರವೀಂದ್ರ,ಮಂಡಲ ಉಪಾಧ್ಯಕ್ಷರಾದ ಅಮೃತ ಲಾಲ್ ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್, ತುಳಸಿ ಉಮೇಶ್ ಮಹಿಳಾ ಮೊರ್ಚದ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಜಿಲ್ಲಾ ಮಹಿಳಾ ಮೊರ್ಚದ ಉಪಾಧ್ಯಕ್ಷ ರಾದ ವಿಜಯ ಅರಂಬೋಡಿ ಕಾರ್ಯದರ್ಶಿ ಅಮಿತಾ ಜಿಲ್ಲಾ ಕಾರ್ಯದರ್ಶಿವಸಂತಿ ಮಚ್ಚಿನ ಉಪಸ್ಥಿತರಿದ್ದರು.

Leave a Comment

error: Content is protected !!