27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ (ದಿನೇಶ್) ನಾಯ್ಕ, ಪತ್ನಿ ವಾರಿಜ, ಪುತ್ರ ಅಪಾಯದಿಂದ ಪಾರಾಗಿದ್ದಾರೆ.


ಈ ಸಂದರ್ಭ ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ವಿಷಯ ತಿಳಿದು ತಕ್ಷಣ ಧಾವಿಸಿದ ಬಿಜೆಪಿ ಬೂತ್ ಸಮಿತಿ 174ರ ಅಧ್ಯಕ್ಷ ಹರೀಶ ವಳಗುಡ್ಡೆ, ಸದಸ್ಯರು ಮತ್ತು ಕಾರ್ಯಕರ್ತರು ಮುರಿದು ಬಿದ್ದ ಮನೆಯ ಸಾಮಾನುಗಳನ್ನು ವಿಲೇವಾರಿ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸಿದರು.


ಬಡವರಾದ ರಾಮಣ್ಣ (ದಿನೇಶ) ನಾಯ್ಕರವರಿಗೆ ಒಂದು ತಾತ್ಕಾಲಿಕ ಮನೆಯನ್ನು ಒಂದು ವಾರದೊಳಗೆ ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ ವಳಗುಡ್ಡೆಯವರು, ಕಾರ್ಯಕರ್ತರು, ಗ್ರಾಮಸ್ಥರು, ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ.
ಸದ್ಯದ ಮಟ್ಟಿಗೆ ರಾಮಣ್ಣ ನಾಯ್ಕರ ಕುಟುಂಬದವರು ಸಂಬಂಧಿಕರಾದ ದಯಾನಂದ ನಾಯ್ಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ.

Related posts

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!