25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ (ದಿನೇಶ್) ನಾಯ್ಕ, ಪತ್ನಿ ವಾರಿಜ, ಪುತ್ರ ಅಪಾಯದಿಂದ ಪಾರಾಗಿದ್ದಾರೆ.


ಈ ಸಂದರ್ಭ ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ವಿಷಯ ತಿಳಿದು ತಕ್ಷಣ ಧಾವಿಸಿದ ಬಿಜೆಪಿ ಬೂತ್ ಸಮಿತಿ 174ರ ಅಧ್ಯಕ್ಷ ಹರೀಶ ವಳಗುಡ್ಡೆ, ಸದಸ್ಯರು ಮತ್ತು ಕಾರ್ಯಕರ್ತರು ಮುರಿದು ಬಿದ್ದ ಮನೆಯ ಸಾಮಾನುಗಳನ್ನು ವಿಲೇವಾರಿ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸಿದರು.


ಬಡವರಾದ ರಾಮಣ್ಣ (ದಿನೇಶ) ನಾಯ್ಕರವರಿಗೆ ಒಂದು ತಾತ್ಕಾಲಿಕ ಮನೆಯನ್ನು ಒಂದು ವಾರದೊಳಗೆ ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ ವಳಗುಡ್ಡೆಯವರು, ಕಾರ್ಯಕರ್ತರು, ಗ್ರಾಮಸ್ಥರು, ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ.
ಸದ್ಯದ ಮಟ್ಟಿಗೆ ರಾಮಣ್ಣ ನಾಯ್ಕರ ಕುಟುಂಬದವರು ಸಂಬಂಧಿಕರಾದ ದಯಾನಂದ ನಾಯ್ಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ.

Related posts

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!