April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಗಮನಕ್ಕೆ ಗ್ರಾಮ ಪಂಚಾಯತ್ ಮೂಲಕ ತಿಳಿಸಿದ್ದು ಅದರಂತೆ ಜು.3 ರಂದು ಅರಣ್ಯ ಇಲಾಖೆಯ ಫಾರೆಸ್ಟ್ ರವಿಚಂದ್ರ ಮತ್ತು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ವಿಭಾಗದ ರಾಕೇಶ್ ಮತ್ತು ನೆರಿಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಯಂ ಬಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಬಿ ಅಶ್ರಫ್ ನೆರಿಯಾ, ಸದಸ್ಯರಾದ ರಮೇಶ್ ಕೆ.ಎಸ್. ಪಂಚಾಯತ್ ಸಿಬಂದಿಗಳಾದ ಮದುಮಲಾ ಸ್ಥಳಕ್ಕೆ ಭೇಟಿ ನೀಡಿದ್ದು ತುರ್ತು ಅಪಾಯದಲ್ಲಿರುವ ಮರವನ್ನು ತೆರವುಗೊಳಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಬಾಲಕೃಷ್ಣ ಗೌಡ, ಸಂಜೀವ ಗೌಡ, ಸೋಮಪ್ಪ ಗೌಡ, ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!