23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಗೇರುಕಟ್ಟೆ: ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿ ಹೊಂದಿ ಊರಿಗೆ ಆಗಮಿಸಿದ ನ್ಯಾಯತರ್ಪು ಗ್ರಾಮದ ವಂಜಾರೆ ಯೋಧ ವಿಕ್ರಂ ಜೆ.ಎನ್. ರವರಿಗೆ ಅಭಿನಂದನಾ ಕಾರ್ಯಕ್ರಮ ಜು. 03 ರಂದು ಗೇರುಕಟ್ಟೆ ಸಹಕಾರಿ ಭವನದಲ್ಲಿ ನಡೆಯಿತು.

ಬೆಳಿಗ್ಗೆ ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಅಭಿನಂದನಾ ಸಮಿತಿಯ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆಯನ್ನು ವಹಿಸಿದರು.

ಈ ವೇಳೆ ಕಳಿಯ, ನ್ಯಾಯತರ್ಪು, ಓಡಿಲ್ನಾಳ ಅಭಿನಂದನಾ ಸಮಿತಿಯಿಂದ ಹಾಗೂ ಎಲ್ಲ ಸಂಘ ಸಂಸ್ಥೆಗಳಿಂದ ಯೋಧ ವಿಕ್ರಂ ಜೆ.ಎನ್ ದಂಪತಿಯನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಎಂ., ಬೆಳ್ತಂಗಡಿ ಮಾಜಿ ಸೈನಿಕ ಸಂಘದ ಗೌರವಾಧ್ಯಕ್ಷ ಮೇಜರ್ ಜನರಲ್ ಎಂ.ವಿ. ಭಟ್, ಮಾವಿನಕಟ್ಟೆ ಸಂತ ಅನ್ನಾರವರ ಚರ್ಚ್, ಫಾದರ್ ಬೆರ್ನಾಡ್,, ಬೆಳ್ತಂಗಡಿ ಮಾಜಿ ಸೈನಿಕರ ಸಂಘ ಅಧ್ಯಕ್ಷ ಮಹಮ್ಮದ್ ರಫಿ, ನಿವೃತ್ತ ಹಾಸನ ಸೈನಿಕ ಕ್ಯಾಪ್ಟನ್ ಬೆಟ್ಟೇ ಗೌಡ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಪರಪ್ಪು ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಪೆಲತ್ತಳಿಕೆ, ಸದಸ್ಯರಾದ ತಂಗಚ್ಚನ್ ಸುರೇಶ್ ಗೌಡ, ಸುಬ್ರಮಣಿ, ದಿನೇಶ್ ಗೌಡ, ಯೋಧನ ಪೋಷಕರಾದ ಶ್ರೀಮತಿ ನಾಗವೇಣಿ ಮತ್ತು ಜನಾರ್ಧನ ಪೂಜಾರಿ ವಂಜಾರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಸಂಚಾಲಕರು, ಕೋಶಾಧಿಕಾರಿ ಮತ್ತು ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಾಜಿ ಸೈನಿಕ ಸಂಘದ ಕಾರ್ಯದರ್ಶಿ ಉಮೇಶ್ ಕಾರ್ಯಕ್ರಮ ನಿರೂಪಿಸಿ, ಸುರೇಶ ಆರ್. ಎನ್ ಸ್ವಾಗತಿಸಿ, ನೇವಿಲ್ ಸ್ಟಿವನ್ ಮೋರಸ್ ಧನ್ಯವಾದವಿತ್ತರು.

Related posts

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya
error: Content is protected !!