23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya
error: Content is protected !!