23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!