ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya
error: Content is protected !!