23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವೇಣೂರು ಪೊಲೀಸ್ ಠಾಣೆ ಇದರ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಆಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಫೋಕ್ಸೋ ಕಾಯ್ದೆಯಡಿ ಮಕ್ಕಳಿಗೆ ಅರಿವು ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀರಾಜು ಪೂಜಾರಿ ವಹಿಸಿಕೊಂಡಿದ್ದರು. ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಣೆ ಇದರ ಬಗ್ಗೆ ವೇಣೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಮುರಗೋಡು ಇವರು ಮಾಹಿತಿ ನೀಡಿದರು. ಪೋಕ್ಸೋ ಕಾಯ್ದೆಯಡಿ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ಸಂರಕ್ಷಣೆಯ ಬಗ್ಗೆ ಆರಕ್ಷಕರಾದ ಶ್ರೀಮತಿ ಕೇಶವತಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆರಕ್ಷಕ ಸಿಬ್ಬಂದಿಗಳಾದ ಆನಂದ, ರಾಜೇಶ್, ಸತ್ಯಪ್ರಕಾಶ್, ಶಾಲಾ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ನಾರಾಯಣ ಪೂಜಾರಿ, ಮುಖ್ಯೋಪಾದ್ಯಾಯರಾದ ರಮೇಶ್ ಎಸ್ ಮಾಳಗೊಂಡ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸತೀಶ್ ಕುಮಾರ್ ಎನ್ ಸ್ವಾಗತಿಸಿ ನಿರೂಪಿಸಿದರು.

Related posts

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya
error: Content is protected !!