September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

ಸೌತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದ ಹಲ್ಲಿಂಗೇರಿ ಸಭಾಭವನದಲ್ಲಿ ಜ್ಯೋತಿ ಜ್ಞಾನವಿಕಾಸ ಕೇಂದ್ರವನ್ನು ದೀಪ ಬೆಳಗಿಸುವುದರ ಮೂಲಕ ಪಂಚಮಿ ಕ್ಲಿನಿಕ್ ವೈದ್ಯರಾದ ತಾರಾ ಉದ್ಘಾಟಿಸಿ ಮಹಿಳೆಯರ ಅಭಿವೃದ್ಧಿಗಾಗಿ ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಪ್ರಬುದ್ಧತೆಯನ್ನು ಹೊಂದಿದ್ದು ಜ್ಯೋತಿ ಎಂಬ ನಾಮಕರಣದೊಂದಿಗೆ ಉದ್ಘಾಟನೆಗೊಂಡ ಜ್ಞಾನ ವಿಕಾಸ ಕೇಂದ್ರ ಜ್ಯೋತಿಯಂತೆ ಬೆಳಗಲಿ ಎಂದರು.

ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಜ್ಞಾನವಿಕಾಸ ಕೇಂದ್ರದ ಹುಟ್ಟು ಮತ್ತು ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಗ್ರಾಮಪಂಚಾಯಿತಿ ಸದಸ್ಯೆ ಹಾಗೂ ಪ್ರಬುದ್ಧ ಕೇಂದ್ರದ ಸದಸ್ಯರಾದ ಪವಿತ್ರ ಮಹಿಳೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಜ್ಞಾನವಿಕಾಸದ ಪಾತ್ರ ಏನು ಎಂಬುದರ ಬಗ್ಗೆ ತಾನೊಬ್ಬ ಪ್ರಬುದ್ಧ ಕೇಂದ್ರದ ಸದಸ್ಯರಾಗಿ ಅಭಿವೃದ್ಧಿ ಹೊಂದಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜನಜಾಗೃತಿ ತಾಲೂಕು ವೇದಿಕೆ ಸದಸ್ಯ ಕುಶಾಲಪ್ಪ, ಒಕ್ಕೂಟ ಅಧ್ಯಕ್ಷ ಅಬ್ದುಲ್ ರಜಾಕ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಒಕ್ಕೂಟ ಪದಾಧಿಕಾರಿಗಳಾದ ಯಶೋಧ ಮತ್ತು ಅಶ್ವಿನಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರದ ಸಂಯೋಜಕಿಯಾದ ಸುಜಾತಾ ರವರಿಗೆ ಕೇಂದ್ರದ ದಾಖಲಾತಿಯನ್ನು ಹಸ್ತಾಂತರ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಕುಸುಮಾ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಧನ್ಯವಾದವಿತ್ತರು. ಸಮನ್ವಯಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya
error: Content is protected !!