ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಜು.4 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಭೇಟಿ ಮಾಡಿ ಸರಕಾರಕ್ಕೆ ಶಿಪಾರಸ್ಸು ಮಾಡಲು ಸಹಕರಿಸಿದ ಇವರನ್ನು ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ ವೆಂಕಣ್ಣ ಕೊಯ್ಯರು, ನವೀನ್ ಗೌಡ ಸವಣಾಲು, ವನಿತಾ ಎಮ್ ಸಾಲಿಯಾನ್, ವೀರೇಂದ್ರ ಕುಮಾರ್ ಜೈನ್ ರಾಜಪಾದ, ಸವಿತಾ ಕೊರಗ, ಅಬ್ದುಲ್ ರಶೀದ್ ಕಕ್ಕಿಂಜೆ, ರೋಯ್ ಸ್ಟೀವನ್ ಮೋನಿಸ್ ರವರು ಉಪಸ್ಥಿತರಿದ್ದರು.

Leave a Comment

error: Content is protected !!