25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

ಪುದುವೆಟ್ಟು : ಶ್ರೀ.ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಜು 03 ರಂದು ಅಂದವಾದ ಆಂಗ್ಲ ಭಾಷಾ ಬರವಣಿಗೆಯ ಬಗ್ಗೆ ಕಾರ್ಯಾಗಾರ ನಡೆಯಿತು .

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರು ಲಕ್ಷ್ಮಿ ನಾರಾಯಣ ಹಾಗೂ ಆಂಗ್ಲ ಭಾಷಾ ಶಿಕ್ಷಕರಾದ ಉಜಿರೆಯ ಹರ್ಷಕುಮಾರ್ ಕೆ.ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಟಾಲಿಕ್ ಶೈಲಿಯಲ್ಲಿ ಇಂಗ್ಲಿಷ್ ಬರವಣಿಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅತ್ತ್ಯುತ್ತಮವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಕಾರ್ಯಾಗಾರದ ಮಾರ್ಗದರ್ಶಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸುಜಾತ ಸ್ವಾಗತಿಸಿದರು . ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದು ಯಶಸ್ಸಿಗೆ ಸಹಕರಿಸಿದರು

Related posts

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya
error: Content is protected !!