September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

ಧರ್ಮಸ್ಥಳ :ಕರ್ನಾಟಕ ಗಮಕ ಕಲಾ ಪರಿಷತ್, ಬೆಳ್ತಂಗಡಿ ಇದರ ವತಿಯಿಂದ ಮನೆ ಮನೆ ಗಮಕ ಎನ್ನುವ ವಿನೂತನ ಕಾರ್ಯಕ್ರಮವು ತುಳು ಶಿವಳ್ಳಿ ಸಭಾ, ಧರ್ಮಸ್ಥಳ ವಲಯದ ಗೌರವಧ್ಯಕ್ಷರಾದ ಗಿರೀಶ ಕುದ್ರೆoತಾಯ ರ ಶಿವ ಪಾರ್ವತಿ ಕೃಪಾದಲ್ಲಿ ನಡೆಯಿತು.


ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಫ್ರೋ. ಮಧೂರು ಮೋಹನ ಕಲ್ಲುರಾಯ, ತಾಲೂಕು ಅಧ್ಯಕ್ಷರಾದ ರಾಮಕೃಷ್ಣ ಭಟ್, ನಿನ್ನಿಕಲ್ಲು, ಹಿರಿಯ ಯಕ್ಷಗಾನ ಧೂರಿಣ ಶ್ರೀ ಭುಜಬಲಿ, ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಅoರ್ಮುಡತ್ತಾಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುವೆಟ್ನಾಯ, ಗಮಕ ಕಲಾ ಪರಿಷತ್ತಿನ ಪದಾಧಿಕಾರಿಗಳು, ಗಿರೀಶ ಕುದ್ರೆoತಾಯರ ಕುಟುಂಬ ವರ್ಗ ದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಗಮಕ ವಾಚನವನ್ನು ಜಯರಾಮ ಕುದ್ರೆoತಾಯರು, ವ್ಯಾಖ್ಯಾನವನ್ನು ಹಿರಿಯ ಕಲಾವಿದರಾದ ಸುರೇಶ ಕುದ್ರೆoತಾಯರು ಬಹಳ ರಸವತ್ತಾಗಿ ನಿರ್ವಹಿಸಿದರು. ಇವರ ಜೊತೆ ಉಡುಪಿಯ ರವರು ವ್ಯಾಖ್ಯಾನ ಕಾರರಾಗಿ ಜೊತೆಯಾದದ್ದು ವಿಶೇಷವಾಗಿತ್ತು.
ರಾಮಕೃಷ್ಣ ಭಟ್ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪಡುವೆಟ್ನಯರು ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ವಾಚನ, ಪ್ರವಚನ ಕಾರರನ್ನು ಹಾಗೂ ಜಿಲ್ಲಾಧ್ಯಕ್ಷರನ್ನು ಶಾಲು ಹಾಕಿ ಗೌರವಿಸಲಾಯಿತು

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!