July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

ಧರ್ಮಸ್ಥಳ :ಕರ್ನಾಟಕ ಗಮಕ ಕಲಾ ಪರಿಷತ್, ಬೆಳ್ತಂಗಡಿ ಇದರ ವತಿಯಿಂದ ಮನೆ ಮನೆ ಗಮಕ ಎನ್ನುವ ವಿನೂತನ ಕಾರ್ಯಕ್ರಮವು ತುಳು ಶಿವಳ್ಳಿ ಸಭಾ, ಧರ್ಮಸ್ಥಳ ವಲಯದ ಗೌರವಧ್ಯಕ್ಷರಾದ ಗಿರೀಶ ಕುದ್ರೆoತಾಯ ರ ಶಿವ ಪಾರ್ವತಿ ಕೃಪಾದಲ್ಲಿ ನಡೆಯಿತು.


ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಫ್ರೋ. ಮಧೂರು ಮೋಹನ ಕಲ್ಲುರಾಯ, ತಾಲೂಕು ಅಧ್ಯಕ್ಷರಾದ ರಾಮಕೃಷ್ಣ ಭಟ್, ನಿನ್ನಿಕಲ್ಲು, ಹಿರಿಯ ಯಕ್ಷಗಾನ ಧೂರಿಣ ಶ್ರೀ ಭುಜಬಲಿ, ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಅoರ್ಮುಡತ್ತಾಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುವೆಟ್ನಾಯ, ಗಮಕ ಕಲಾ ಪರಿಷತ್ತಿನ ಪದಾಧಿಕಾರಿಗಳು, ಗಿರೀಶ ಕುದ್ರೆoತಾಯರ ಕುಟುಂಬ ವರ್ಗ ದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಗಮಕ ವಾಚನವನ್ನು ಜಯರಾಮ ಕುದ್ರೆoತಾಯರು, ವ್ಯಾಖ್ಯಾನವನ್ನು ಹಿರಿಯ ಕಲಾವಿದರಾದ ಸುರೇಶ ಕುದ್ರೆoತಾಯರು ಬಹಳ ರಸವತ್ತಾಗಿ ನಿರ್ವಹಿಸಿದರು. ಇವರ ಜೊತೆ ಉಡುಪಿಯ ರವರು ವ್ಯಾಖ್ಯಾನ ಕಾರರಾಗಿ ಜೊತೆಯಾದದ್ದು ವಿಶೇಷವಾಗಿತ್ತು.
ರಾಮಕೃಷ್ಣ ಭಟ್ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪಡುವೆಟ್ನಯರು ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ವಾಚನ, ಪ್ರವಚನ ಕಾರರನ್ನು ಹಾಗೂ ಜಿಲ್ಲಾಧ್ಯಕ್ಷರನ್ನು ಶಾಲು ಹಾಕಿ ಗೌರವಿಸಲಾಯಿತು

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya
error: Content is protected !!