25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024 -2025 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲರಾದ ಶ್ರೀಮತಿ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿದ ಈ ಕಾರ್ಯಕ್ರಮವನ್ನು ಸಭಾಪತಿ ಕು| ಶ್ರಾವ್ಯ ನಿರೂಪಿಸಿದರು. ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!