April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024 -2025 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲರಾದ ಶ್ರೀಮತಿ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿದ ಈ ಕಾರ್ಯಕ್ರಮವನ್ನು ಸಭಾಪತಿ ಕು| ಶ್ರಾವ್ಯ ನಿರೂಪಿಸಿದರು. ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya
error: Content is protected !!