23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024 -2025 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲರಾದ ಶ್ರೀಮತಿ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿದ ಈ ಕಾರ್ಯಕ್ರಮವನ್ನು ಸಭಾಪತಿ ಕು| ಶ್ರಾವ್ಯ ನಿರೂಪಿಸಿದರು. ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!