22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024 -2025 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲರಾದ ಶ್ರೀಮತಿ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿದ ಈ ಕಾರ್ಯಕ್ರಮವನ್ನು ಸಭಾಪತಿ ಕು| ಶ್ರಾವ್ಯ ನಿರೂಪಿಸಿದರು. ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya
error: Content is protected !!