25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

Related posts

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
error: Content is protected !!