22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!