July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

ಧರ್ಮಸ್ಥಳ :ಕರ್ನಾಟಕ ಗಮಕ ಕಲಾ ಪರಿಷತ್, ಬೆಳ್ತಂಗಡಿ ಇದರ ವತಿಯಿಂದ ಮನೆ ಮನೆ ಗಮಕ ಎನ್ನುವ ವಿನೂತನ ಕಾರ್ಯಕ್ರಮವು ತುಳು ಶಿವಳ್ಳಿ ಸಭಾ, ಧರ್ಮಸ್ಥಳ ವಲಯದ ಗೌರವಧ್ಯಕ್ಷರಾದ ಗಿರೀಶ ಕುದ್ರೆoತಾಯ ರ ಶಿವ ಪಾರ್ವತಿ ಕೃಪಾದಲ್ಲಿ ನಡೆಯಿತು.


ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಫ್ರೋ. ಮಧೂರು ಮೋಹನ ಕಲ್ಲುರಾಯ, ತಾಲೂಕು ಅಧ್ಯಕ್ಷರಾದ ರಾಮಕೃಷ್ಣ ಭಟ್, ನಿನ್ನಿಕಲ್ಲು, ಹಿರಿಯ ಯಕ್ಷಗಾನ ಧೂರಿಣ ಶ್ರೀ ಭುಜಬಲಿ, ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಅoರ್ಮುಡತ್ತಾಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುವೆಟ್ನಾಯ, ಗಮಕ ಕಲಾ ಪರಿಷತ್ತಿನ ಪದಾಧಿಕಾರಿಗಳು, ಗಿರೀಶ ಕುದ್ರೆoತಾಯರ ಕುಟುಂಬ ವರ್ಗ ದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಗಮಕ ವಾಚನವನ್ನು ಜಯರಾಮ ಕುದ್ರೆoತಾಯರು, ವ್ಯಾಖ್ಯಾನವನ್ನು ಹಿರಿಯ ಕಲಾವಿದರಾದ ಸುರೇಶ ಕುದ್ರೆoತಾಯರು ಬಹಳ ರಸವತ್ತಾಗಿ ನಿರ್ವಹಿಸಿದರು. ಇವರ ಜೊತೆ ಉಡುಪಿಯ ರವರು ವ್ಯಾಖ್ಯಾನ ಕಾರರಾಗಿ ಜೊತೆಯಾದದ್ದು ವಿಶೇಷವಾಗಿತ್ತು.
ರಾಮಕೃಷ್ಣ ಭಟ್ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪಡುವೆಟ್ನಯರು ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ವಾಚನ, ಪ್ರವಚನ ಕಾರರನ್ನು ಹಾಗೂ ಜಿಲ್ಲಾಧ್ಯಕ್ಷರನ್ನು ಶಾಲು ಹಾಕಿ ಗೌರವಿಸಲಾಯಿತು

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya
error: Content is protected !!