25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024 -2025 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲರಾದ ಶ್ರೀಮತಿ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿದ ಈ ಕಾರ್ಯಕ್ರಮವನ್ನು ಸಭಾಪತಿ ಕು| ಶ್ರಾವ್ಯ ನಿರೂಪಿಸಿದರು. ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya
error: Content is protected !!