July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024 -2025 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲರಾದ ಶ್ರೀಮತಿ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು. ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿದ ಈ ಕಾರ್ಯಕ್ರಮವನ್ನು ಸಭಾಪತಿ ಕು| ಶ್ರಾವ್ಯ ನಿರೂಪಿಸಿದರು. ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya
error: Content is protected !!