23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಈಕೆ ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

Related posts

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya
error: Content is protected !!