24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

ಪುದುವೆಟ್ಟು : ಶ್ರೀ.ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಜು 03 ರಂದು ಅಂದವಾದ ಆಂಗ್ಲ ಭಾಷಾ ಬರವಣಿಗೆಯ ಬಗ್ಗೆ ಕಾರ್ಯಾಗಾರ ನಡೆಯಿತು .

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರು ಲಕ್ಷ್ಮಿ ನಾರಾಯಣ ಹಾಗೂ ಆಂಗ್ಲ ಭಾಷಾ ಶಿಕ್ಷಕರಾದ ಉಜಿರೆಯ ಹರ್ಷಕುಮಾರ್ ಕೆ.ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಟಾಲಿಕ್ ಶೈಲಿಯಲ್ಲಿ ಇಂಗ್ಲಿಷ್ ಬರವಣಿಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅತ್ತ್ಯುತ್ತಮವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಕಾರ್ಯಾಗಾರದ ಮಾರ್ಗದರ್ಶಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸುಜಾತ ಸ್ವಾಗತಿಸಿದರು . ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದು ಯಶಸ್ಸಿಗೆ ಸಹಕರಿಸಿದರು

Related posts

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
error: Content is protected !!