23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

ಧರ್ಮಸ್ಥಳ :ಕರ್ನಾಟಕ ಗಮಕ ಕಲಾ ಪರಿಷತ್, ಬೆಳ್ತಂಗಡಿ ಇದರ ವತಿಯಿಂದ ಮನೆ ಮನೆ ಗಮಕ ಎನ್ನುವ ವಿನೂತನ ಕಾರ್ಯಕ್ರಮವು ತುಳು ಶಿವಳ್ಳಿ ಸಭಾ, ಧರ್ಮಸ್ಥಳ ವಲಯದ ಗೌರವಧ್ಯಕ್ಷರಾದ ಗಿರೀಶ ಕುದ್ರೆoತಾಯ ರ ಶಿವ ಪಾರ್ವತಿ ಕೃಪಾದಲ್ಲಿ ನಡೆಯಿತು.


ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಫ್ರೋ. ಮಧೂರು ಮೋಹನ ಕಲ್ಲುರಾಯ, ತಾಲೂಕು ಅಧ್ಯಕ್ಷರಾದ ರಾಮಕೃಷ್ಣ ಭಟ್, ನಿನ್ನಿಕಲ್ಲು, ಹಿರಿಯ ಯಕ್ಷಗಾನ ಧೂರಿಣ ಶ್ರೀ ಭುಜಬಲಿ, ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಅoರ್ಮುಡತ್ತಾಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುವೆಟ್ನಾಯ, ಗಮಕ ಕಲಾ ಪರಿಷತ್ತಿನ ಪದಾಧಿಕಾರಿಗಳು, ಗಿರೀಶ ಕುದ್ರೆoತಾಯರ ಕುಟುಂಬ ವರ್ಗ ದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಗಮಕ ವಾಚನವನ್ನು ಜಯರಾಮ ಕುದ್ರೆoತಾಯರು, ವ್ಯಾಖ್ಯಾನವನ್ನು ಹಿರಿಯ ಕಲಾವಿದರಾದ ಸುರೇಶ ಕುದ್ರೆoತಾಯರು ಬಹಳ ರಸವತ್ತಾಗಿ ನಿರ್ವಹಿಸಿದರು. ಇವರ ಜೊತೆ ಉಡುಪಿಯ ರವರು ವ್ಯಾಖ್ಯಾನ ಕಾರರಾಗಿ ಜೊತೆಯಾದದ್ದು ವಿಶೇಷವಾಗಿತ್ತು.
ರಾಮಕೃಷ್ಣ ಭಟ್ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪಡುವೆಟ್ನಯರು ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ವಾಚನ, ಪ್ರವಚನ ಕಾರರನ್ನು ಹಾಗೂ ಜಿಲ್ಲಾಧ್ಯಕ್ಷರನ್ನು ಶಾಲು ಹಾಕಿ ಗೌರವಿಸಲಾಯಿತು

Related posts

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!