September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

ಪುತ್ತೂರು : ಕಳೆದ ಮೂರು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅತೀ ಹೆಚ್ಚೂ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ , ಯಶಸ್ವಿಯಾಗಿ ಮುನ್ನಡೆಯುತ್ತಿರುವ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯು ರಾಷ್ಟ್ರೀಯ ಅರ್ಹತಾ ಪರೀಕ್ಷೆಗೂ ಕೂಡಲೇ ತರಬೇತಿ ಪ್ರಾರಂಭಿಸಲಿದೆ.


ಕಾರಣಾಂತರದಿಂದ ತಡೆಹಿಡಿಯಲಾಗಿರುವ 2024 ರ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಇದರ ಮರು ಪರೀಕ್ಷೆಯನ್ನು ಸರಕಾರವು ಮುಂದಿನ ಆಗಸ್ಟ್ ತಿಂಗಳ ಕೊನೆಗೆ ಆಯೋಜಿಸಲು ತೀರ್ಮಾನಿಸಿದ್ದು , ಪರೀಕ್ಷೆ ಎದುರಿಸೋ ಆಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ಒಂದು ತಿಂಗಳ ಅವಧಿಯ ಆನ್ಲೈನ್ ತರಬೇತಿ ನೀಡಲು ನುರಿತ ತರಬೇತು ತಂಡ ಇದರ ಮೂಲಕ ಯೋಜನೆ ಹಾಕಿಕೊಂಡಿದೆ.

N E T ಮರು ಪರೀಕ್ಷೆಯನ್ನು ಎದುರಿಸಲಿರೋ ಅಭ್ಯರ್ಥಿಗಳೆಲ್ಲಾ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಅಕಾಡೆಮಿ ಪ್ರಕಟಣೆ ಹೇಳಿದೆ.

ಕಳೆದ K-SET/KAR-TET ಪರೀಕ್ಷೆಯಲ್ಲೂ ಅಕಾಡೆಮಿ ಸಾಧನೆ ಅಮೋಘ :

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಾಗೂ ಇತರೆ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯ 150ಕ್ಕೂ ಅಧಿಕ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಾರಾಗಿ, ನೇಮಕಾತಿಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಒಂದು ತಿಂಗಳ ಅವಧಿಯಲ್ಲಿ ನಡೆಯಲಿರುವ ಈ ತರಬೇತಿಯು ಆನ್ಲೈನ್ ಮೂಲಕ ಜು.10 ರಿಂದ ದಿನನಿತ್ಯ ಒಂದು ಗಂಟೆ ಸಮಯ , ಅಂದರೆ ರಾತ್ರಿ ಸಮಯ 8 ರಿಂದ 9 ರವರೆಗೆ ನಡೆಯಲಿದೆ. ಆಸಕ್ತ 25 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಇದ್ದು , ಕೂಡಲೇ ಸಂಸ್ಥೆಯನ್ನು ಸಂಪರ್ಕಿಸಿ ದಾಖಲಾತಿಯನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ವಿವರಗಳಿಗಾಗಿ: ವಿದ್ಯಾಮಾತಾ ಅಕಾಡೆಮಿ ಇದರ ಪುತ್ತೂರು ಶಾಖೆ ದೂರವಾಣಿ ಸಂಖ್ಯೆ 96204 68869 , 9148935808 ಅಥವಾ ಸುಳ್ಯ ಶಾಖೆ ಇದರ ದೂರವಾಣಿ ಸಂಖ್ಯೆ 9448527606 ಅಥವಾ ಕಾರ್ಕಳ ಶಾಖೆ ಇದರ ದೂರವಾಣಿ ಸಂಖ್ಯೆ 8310484380 , 9740564044 ಸಂಪರ್ಕಿಸಬಹುದೆಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

Related posts

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!