September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ನೆಟ್ವರ್ಕ್ ಸಮಸ್ಯೆಯಾಗಿದ್ದು ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ನ ಮೂರು ಟವರ್ ಗಳಿದ್ದು ಏನೂ ಪ್ರಯೋಜನವಿಲ್ಲದಂತಾಗಿದೆ.

ಈ ಟವರ್ ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ಸ್ಥಳೀಯರಿಗೆ ದೊಡ್ಡ ಸಮಸ್ಯೆಯಾಗಿದೆ. ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ.. ಇನ್ನು ಸಂಬಂಧ ಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟು ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಮದ್ದಡ್ಕ ಆಸುಪಾಸಿನ ನಾಗರಿಕರಿಗೆ ಆಗುವ ತೊಂದರೆಯನ್ನು ಆದಷ್ಟು ಬೇಗ ನಿವಾರಿಸಬೇಕೆಂದು ಸ್ಥಳೀಯ ನಿವಾಸಿ ರಿಯಾಜ್ ಮದ್ದಡ್ಕ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಅಪ್ಸರ ಫ್ಯಾಷನ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!