23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ನೆಟ್ವರ್ಕ್ ಸಮಸ್ಯೆಯಾಗಿದ್ದು ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ನ ಮೂರು ಟವರ್ ಗಳಿದ್ದು ಏನೂ ಪ್ರಯೋಜನವಿಲ್ಲದಂತಾಗಿದೆ.

ಈ ಟವರ್ ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ಸ್ಥಳೀಯರಿಗೆ ದೊಡ್ಡ ಸಮಸ್ಯೆಯಾಗಿದೆ. ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ.. ಇನ್ನು ಸಂಬಂಧ ಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟು ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಮದ್ದಡ್ಕ ಆಸುಪಾಸಿನ ನಾಗರಿಕರಿಗೆ ಆಗುವ ತೊಂದರೆಯನ್ನು ಆದಷ್ಟು ಬೇಗ ನಿವಾರಿಸಬೇಕೆಂದು ಸ್ಥಳೀಯ ನಿವಾಸಿ ರಿಯಾಜ್ ಮದ್ದಡ್ಕ ತಿಳಿಸಿದ್ದಾರೆ.

Related posts

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya
error: Content is protected !!