30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ.

ಈ ಬಗ್ಗೆ ಶಾಸಕ ಹರೀಶ್ ಪೂಂಜ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ ಸೂಚನೆಯಂತೆ ಜು. 04 ರಂದು ಅಧಿಕಾರಿಗಳಿಗೆ ತಿಳಿಸಲಾಯಿತು. ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಬಸ್ ಬರುವ ಸಮಯವನ್ನು ನಿಗದಿ ಪಡಿಸಲು ಸೂಚಿಸಲಾಯಿತು. ವಾಸ್ತವ ವಿಷಯ ತಿಳಿದ ಅಧಿಕಾರಿಗಳು ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಕರ್ಕೆರ, ಹಿರಿಯರಾದ ಜಯಂತ್ ಗೌಡ ಗುರಿಪಳ್ಳ, ವಿನಯ್ ಕೆ ಗುರಿಪಳ್ಳ ಉಪಸ್ಥಿತರಿದ್ದರು,

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya
error: Content is protected !!