23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ.

ಈ ಬಗ್ಗೆ ಶಾಸಕ ಹರೀಶ್ ಪೂಂಜ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ ಸೂಚನೆಯಂತೆ ಜು. 04 ರಂದು ಅಧಿಕಾರಿಗಳಿಗೆ ತಿಳಿಸಲಾಯಿತು. ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಬಸ್ ಬರುವ ಸಮಯವನ್ನು ನಿಗದಿ ಪಡಿಸಲು ಸೂಚಿಸಲಾಯಿತು. ವಾಸ್ತವ ವಿಷಯ ತಿಳಿದ ಅಧಿಕಾರಿಗಳು ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಕರ್ಕೆರ, ಹಿರಿಯರಾದ ಜಯಂತ್ ಗೌಡ ಗುರಿಪಳ್ಳ, ವಿನಯ್ ಕೆ ಗುರಿಪಳ್ಳ ಉಪಸ್ಥಿತರಿದ್ದರು,

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!