22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ.

ಈ ಬಗ್ಗೆ ಶಾಸಕ ಹರೀಶ್ ಪೂಂಜ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ ಸೂಚನೆಯಂತೆ ಜು. 04 ರಂದು ಅಧಿಕಾರಿಗಳಿಗೆ ತಿಳಿಸಲಾಯಿತು. ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಬಸ್ ಬರುವ ಸಮಯವನ್ನು ನಿಗದಿ ಪಡಿಸಲು ಸೂಚಿಸಲಾಯಿತು. ವಾಸ್ತವ ವಿಷಯ ತಿಳಿದ ಅಧಿಕಾರಿಗಳು ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಕರ್ಕೆರ, ಹಿರಿಯರಾದ ಜಯಂತ್ ಗೌಡ ಗುರಿಪಳ್ಳ, ವಿನಯ್ ಕೆ ಗುರಿಪಳ್ಳ ಉಪಸ್ಥಿತರಿದ್ದರು,

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya
error: Content is protected !!