25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ.

ಈ ಬಗ್ಗೆ ಶಾಸಕ ಹರೀಶ್ ಪೂಂಜ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ ಸೂಚನೆಯಂತೆ ಜು. 04 ರಂದು ಅಧಿಕಾರಿಗಳಿಗೆ ತಿಳಿಸಲಾಯಿತು. ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಬಸ್ ಬರುವ ಸಮಯವನ್ನು ನಿಗದಿ ಪಡಿಸಲು ಸೂಚಿಸಲಾಯಿತು. ವಾಸ್ತವ ವಿಷಯ ತಿಳಿದ ಅಧಿಕಾರಿಗಳು ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಕರ್ಕೆರ, ಹಿರಿಯರಾದ ಜಯಂತ್ ಗೌಡ ಗುರಿಪಳ್ಳ, ವಿನಯ್ ಕೆ ಗುರಿಪಳ್ಳ ಉಪಸ್ಥಿತರಿದ್ದರು,

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya
error: Content is protected !!