April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು (ಜು.6 ರಂದು) ನಾಳೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದು, ಇಸ್ರೋ ಬೆಂಗಳೂರು ಇದರ ಹಿರಿಯ ವಿಜ್ಞಾನಿ ಪಿ.ವಾಸುದೇವ ರಾವ್ ಭಾಗವಹಿಸಲಿದ್ದಾರೆ. ಸುಧಾ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ಉಮಾ ಅನಂತ್ ಉಪನ್ಯಾಸ ನೀಡಲಿದ್ದು, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

ಸಂಘದ ಅಧ್ಯಕ್ಷ ಚೈತೇಶ್‌ ಇಳಂತಿಲ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ತನುಶ್ರೀ, ಕಾಯರ್ತಡ್ಕ ಸರ್ಕಾರಿ ಪ್ರೌಢ ಶಾಲೆಯ ಮೇಘನಾ ಹಾಗೂ ಮಚ್ಚಿನ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಜಿಯಾದ್ ಇವರಿಗೆ ಗೌರವಾರ್ಪಣೆ, ಪತ್ರಕರ್ತ ಮನೋಹರ್ ಬಳಂಜ ಹಾಗೂ ಲಿಖಿತ ದಂಪತಿ ವತಿಯಿಂದ ಅನಾರೋಗ್ಯಪೀಡಿತ ಮಕ್ಕಳ ಚಿಕಿತ್ಸೆಗಾಗಿ ಅರ್ಹ 6 ಮಂದಿಗೆ ದಿತಿ ಸಾಂತ್ವನ ನಿಧಿ ವಿತರಣೆ ನಡೆಯಲಿದೆ.

Related posts

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!