24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು (ಜು.6 ರಂದು) ನಾಳೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದು, ಇಸ್ರೋ ಬೆಂಗಳೂರು ಇದರ ಹಿರಿಯ ವಿಜ್ಞಾನಿ ಪಿ.ವಾಸುದೇವ ರಾವ್ ಭಾಗವಹಿಸಲಿದ್ದಾರೆ. ಸುಧಾ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ಉಮಾ ಅನಂತ್ ಉಪನ್ಯಾಸ ನೀಡಲಿದ್ದು, ವಿಧಾನ ಪರಿಷತ್‌ ಶಾಸಕ ಪ್ರತಾಪ ಸಿಂಹ ನಾಯಕ್, ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

ಸಂಘದ ಅಧ್ಯಕ್ಷ ಚೈತೇಶ್‌ ಇಳಂತಿಲ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ತನುಶ್ರೀ, ಕಾಯರ್ತಡ್ಕ ಸರ್ಕಾರಿ ಪ್ರೌಢ ಶಾಲೆಯ ಮೇಘನಾ ಹಾಗೂ ಮಚ್ಚಿನ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಜಿಯಾದ್ ಇವರಿಗೆ ಗೌರವಾರ್ಪಣೆ, ಪತ್ರಕರ್ತ ಮನೋಹರ್ ಬಳಂಜ ಹಾಗೂ ಲಿಖಿತ ದಂಪತಿ ವತಿಯಿಂದ ಅನಾರೋಗ್ಯಪೀಡಿತ ಮಕ್ಕಳ ಚಿಕಿತ್ಸೆಗಾಗಿ ಅರ್ಹ 6 ಮಂದಿಗೆ ದಿತಿ ಸಾಂತ್ವನ ನಿಧಿ ವಿತರಣೆ ನಡೆಯಲಿದೆ.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya
error: Content is protected !!