23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಜು.5ರಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಬೆಳ್ತ೦ಗಡಿ ಶಾಸಕ ಹರೀಶ್‌ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸ೦ದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಖದ್ದು ಹಾಜರಾತಿಯಿ೦ದ ವಿನಾಯಿತಿ ನೀಡಿ ಹೈಕೋರ್ಟ್‌ ಆದೇಶ ಮಾಡಿದೆ. ನ್ಯಾಯವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾ೦ಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವದಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.

Related posts

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya
error: Content is protected !!