22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಜು.5ರಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಬೆಳ್ತ೦ಗಡಿ ಶಾಸಕ ಹರೀಶ್‌ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸ೦ದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಖದ್ದು ಹಾಜರಾತಿಯಿ೦ದ ವಿನಾಯಿತಿ ನೀಡಿ ಹೈಕೋರ್ಟ್‌ ಆದೇಶ ಮಾಡಿದೆ. ನ್ಯಾಯವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾ೦ಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವದಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya
error: Content is protected !!