ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ಹುಟ್ಟದೆಯಿರಲಿ ನಾರಿಯರೆನ್ನವೊಲು”ಕಾವ್ಯದ 16 ಭಾಗಗಳನ್ನು ಗಮಕದಲ್ಲಿ ಪ್ರಸ್ತುತ ಪಡಿಸಲಾಯಿತು.

ಸಂಪನ್ಮೂಲಗಳ ವ್ಯಕ್ತಿಗಳಾಗಿ ಪ್ರೋ. ಮಧೂರು ಮೋಹನ ಕಲ್ಲುರಾಯ ಹಾಗೂ ಶ್ರೀ ವಿದ್ಯಾ ಐತಾಳ್ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಕವಿತಾ ಉಮೇಶ್ ವಂದಿಸಿ, ನಿರೂಪಿಸಿದರು.

Leave a Comment

error: Content is protected !!