23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಬಂಟ್ವಾಳ ತಾಲೂಕು ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪರಿಸರದ ದಯನೀಯ ಸ್ಥಿತಿ:ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ನೈನಾಡು ಮತ್ತು ಬೆಳ್ತಂಗಡಿ ತಾಲೂಕಿನ ಕಾಜಲ ಪ್ರದೇಶ ಕ್ಕೆ ಸಂಪರ್ಕ ರಸ್ತೆ ಯ ಮಧ್ಯೆ ತೊರೆಯೊಂದು ಹರಿಯುತ್ತಿದ್ದು ಇದಕ್ಕೆ ಸೇತುವೆ ನಿರ್ಮಾಣ ಮಾಡಲು ಬಹಳಷ್ಟು ಕಾಲದಿಂದ ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಾಡಿರುವ ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಈ ಭಾಗದ ಜನರದ್ದು. ಪ್ರತಿ ನಿತ್ಯ ಸರ್ಕಾರಿ ಪ್ರೌಢಶಾಲೆ
ಕಿರಿಯ ಪ್ರಾಥಮಿಕ ಶಾಲೆಅಂಗನವಾಡಿ ಕೇಂದ್ರ ಗಳಿಗೆ ಮಕ್ಕಳು ,.ಹಾಲು ಉತ್ಪಾದಕ ರೈತರು ಇದೇ ದಾರಿಯಲ್ಲಿ ಡಿಪೋ ಗಳಿಗೆ .ಇದೇ ದಾರಿಯಾಗಿ ಬರಬೇಕು

ಶಾಲಾ ವಿದ್ಯಾರ್ಥಿಗಳು ಸೇರಿ ನೂರಾರು ಜನರು ಈ ಕಿರು ದಾರಿಯಲ್ಲೇ ಸಾಗಬೇಕಾಗಿದೆ. ಇದರ ಹೊರತಾಗಿ ಮಾರ್ಗ ವನ್ನು ಅವಲಂಬಿಸಿ ಬರಬೇಕಾದರೆ ಪುರಿಯ, ಪುಂಜಾಲಕಟ್ಟೆ, ಮೂರ್ಜೆ, ದಾರಿಯಾಗಿ ನೈನಾಡಿಗೆ ಸುಮಾರು 15 ಕೀ ಮೀ ಸುತ್ತಿ ಬರಬೇಕು. ಮಳೆಗಾಲದಲ್ಲಿ ತೊರೆ ತುಂಬಿ ಹರಿದಾಗ ಮಕ್ಕಳಾದಿಯಾಗಿ ಜನರೆಲ್ಲರೂ ನೀರು ಇಳಿಯುವ ತನಕ ಕಾದು ಕುಳಿತು ಕೊಳ್ಳಬೇಕಾದ ಪರಿಸ್ಥಿತಿ. ಏನಾದರೂ ಆಕಸ್ಮಿಕ, ಸಂಭವಿಸಿದರೆ ದೇವರೆ ಗತಿ. ಕಾಜಲ ದ ಅಸು ಪಾಸಿನ ಜನತೆಯ ಕೂಗು ಅರಣ್ಯ ರೋಧನ ವಾಗಿದೆ
ಇವತ್ತು ವಯೋ ವೃದ್ಧರೋರ್ವರು ಮರಣ ಹೊಂದಿದ್ದು, ಅವರ ಅಂತ್ಯಕ್ರಿಯೆ ನಡೆಸಲು ದೇಹವನ್ನು ಸರಿ ಸುಮಾರು ಒಂದು ಕಿಲೋಮೀಟರ್ ದೂರದ ತನಕ ಹೊತ್ತು ತಂದು ನಂತರ ಅಂಬ್ಯುಲೆನ್ಸ್ ಮುಖೇನ ಸ್ಮಶಾನ ಕ್ಕೆ ಸಾಗಿಸಲಾಯಿತು. ತುಂಬಿ ಹರಿಯುತ್ತಿರುವ ತೊರೆಯ ಮೇಲಿನ ಕಿಂಡಿ ಅಣೆಕಟ್ಟಿನ ಕಿರು ದಾರಿಯಲ್ಲಿ ಬಹಳ ಪ್ರಯಾಸಪಟ್ಟು ಮರಣವನ್ನು ಹೊತ್ತು ಕೊಂಡು ಬರಬೇಕಾದ ದೃಶ್ಯ ಮೂಲಭೂತ ಸೌಕರ್ಯಗಳ ಕುಂದುಕೊರತೆ ಗೆ ಜ್ವಲಂತ ಸಾಕ್ಷಿಯಾಗಿತ್ತು

Related posts

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!