25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಬಂಟ್ವಾಳ ತಾಲೂಕು ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪರಿಸರದ ದಯನೀಯ ಸ್ಥಿತಿ:ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ನೈನಾಡು ಮತ್ತು ಬೆಳ್ತಂಗಡಿ ತಾಲೂಕಿನ ಕಾಜಲ ಪ್ರದೇಶ ಕ್ಕೆ ಸಂಪರ್ಕ ರಸ್ತೆ ಯ ಮಧ್ಯೆ ತೊರೆಯೊಂದು ಹರಿಯುತ್ತಿದ್ದು ಇದಕ್ಕೆ ಸೇತುವೆ ನಿರ್ಮಾಣ ಮಾಡಲು ಬಹಳಷ್ಟು ಕಾಲದಿಂದ ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಾಡಿರುವ ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಈ ಭಾಗದ ಜನರದ್ದು. ಪ್ರತಿ ನಿತ್ಯ ಸರ್ಕಾರಿ ಪ್ರೌಢಶಾಲೆ
ಕಿರಿಯ ಪ್ರಾಥಮಿಕ ಶಾಲೆಅಂಗನವಾಡಿ ಕೇಂದ್ರ ಗಳಿಗೆ ಮಕ್ಕಳು ,.ಹಾಲು ಉತ್ಪಾದಕ ರೈತರು ಇದೇ ದಾರಿಯಲ್ಲಿ ಡಿಪೋ ಗಳಿಗೆ .ಇದೇ ದಾರಿಯಾಗಿ ಬರಬೇಕು

ಶಾಲಾ ವಿದ್ಯಾರ್ಥಿಗಳು ಸೇರಿ ನೂರಾರು ಜನರು ಈ ಕಿರು ದಾರಿಯಲ್ಲೇ ಸಾಗಬೇಕಾಗಿದೆ. ಇದರ ಹೊರತಾಗಿ ಮಾರ್ಗ ವನ್ನು ಅವಲಂಬಿಸಿ ಬರಬೇಕಾದರೆ ಪುರಿಯ, ಪುಂಜಾಲಕಟ್ಟೆ, ಮೂರ್ಜೆ, ದಾರಿಯಾಗಿ ನೈನಾಡಿಗೆ ಸುಮಾರು 15 ಕೀ ಮೀ ಸುತ್ತಿ ಬರಬೇಕು. ಮಳೆಗಾಲದಲ್ಲಿ ತೊರೆ ತುಂಬಿ ಹರಿದಾಗ ಮಕ್ಕಳಾದಿಯಾಗಿ ಜನರೆಲ್ಲರೂ ನೀರು ಇಳಿಯುವ ತನಕ ಕಾದು ಕುಳಿತು ಕೊಳ್ಳಬೇಕಾದ ಪರಿಸ್ಥಿತಿ. ಏನಾದರೂ ಆಕಸ್ಮಿಕ, ಸಂಭವಿಸಿದರೆ ದೇವರೆ ಗತಿ. ಕಾಜಲ ದ ಅಸು ಪಾಸಿನ ಜನತೆಯ ಕೂಗು ಅರಣ್ಯ ರೋಧನ ವಾಗಿದೆ
ಇವತ್ತು ವಯೋ ವೃದ್ಧರೋರ್ವರು ಮರಣ ಹೊಂದಿದ್ದು, ಅವರ ಅಂತ್ಯಕ್ರಿಯೆ ನಡೆಸಲು ದೇಹವನ್ನು ಸರಿ ಸುಮಾರು ಒಂದು ಕಿಲೋಮೀಟರ್ ದೂರದ ತನಕ ಹೊತ್ತು ತಂದು ನಂತರ ಅಂಬ್ಯುಲೆನ್ಸ್ ಮುಖೇನ ಸ್ಮಶಾನ ಕ್ಕೆ ಸಾಗಿಸಲಾಯಿತು. ತುಂಬಿ ಹರಿಯುತ್ತಿರುವ ತೊರೆಯ ಮೇಲಿನ ಕಿಂಡಿ ಅಣೆಕಟ್ಟಿನ ಕಿರು ದಾರಿಯಲ್ಲಿ ಬಹಳ ಪ್ರಯಾಸಪಟ್ಟು ಮರಣವನ್ನು ಹೊತ್ತು ಕೊಂಡು ಬರಬೇಕಾದ ದೃಶ್ಯ ಮೂಲಭೂತ ಸೌಕರ್ಯಗಳ ಕುಂದುಕೊರತೆ ಗೆ ಜ್ವಲಂತ ಸಾಕ್ಷಿಯಾಗಿತ್ತು

Related posts

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!