25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಬಂಟ್ವಾಳ ತಾಲೂಕು ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪರಿಸರದ ದಯನೀಯ ಸ್ಥಿತಿ:ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ನೈನಾಡು ಮತ್ತು ಬೆಳ್ತಂಗಡಿ ತಾಲೂಕಿನ ಕಾಜಲ ಪ್ರದೇಶ ಕ್ಕೆ ಸಂಪರ್ಕ ರಸ್ತೆ ಯ ಮಧ್ಯೆ ತೊರೆಯೊಂದು ಹರಿಯುತ್ತಿದ್ದು ಇದಕ್ಕೆ ಸೇತುವೆ ನಿರ್ಮಾಣ ಮಾಡಲು ಬಹಳಷ್ಟು ಕಾಲದಿಂದ ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಾಡಿರುವ ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಈ ಭಾಗದ ಜನರದ್ದು. ಪ್ರತಿ ನಿತ್ಯ ಸರ್ಕಾರಿ ಪ್ರೌಢಶಾಲೆ
ಕಿರಿಯ ಪ್ರಾಥಮಿಕ ಶಾಲೆಅಂಗನವಾಡಿ ಕೇಂದ್ರ ಗಳಿಗೆ ಮಕ್ಕಳು ,.ಹಾಲು ಉತ್ಪಾದಕ ರೈತರು ಇದೇ ದಾರಿಯಲ್ಲಿ ಡಿಪೋ ಗಳಿಗೆ .ಇದೇ ದಾರಿಯಾಗಿ ಬರಬೇಕು

ಶಾಲಾ ವಿದ್ಯಾರ್ಥಿಗಳು ಸೇರಿ ನೂರಾರು ಜನರು ಈ ಕಿರು ದಾರಿಯಲ್ಲೇ ಸಾಗಬೇಕಾಗಿದೆ. ಇದರ ಹೊರತಾಗಿ ಮಾರ್ಗ ವನ್ನು ಅವಲಂಬಿಸಿ ಬರಬೇಕಾದರೆ ಪುರಿಯ, ಪುಂಜಾಲಕಟ್ಟೆ, ಮೂರ್ಜೆ, ದಾರಿಯಾಗಿ ನೈನಾಡಿಗೆ ಸುಮಾರು 15 ಕೀ ಮೀ ಸುತ್ತಿ ಬರಬೇಕು. ಮಳೆಗಾಲದಲ್ಲಿ ತೊರೆ ತುಂಬಿ ಹರಿದಾಗ ಮಕ್ಕಳಾದಿಯಾಗಿ ಜನರೆಲ್ಲರೂ ನೀರು ಇಳಿಯುವ ತನಕ ಕಾದು ಕುಳಿತು ಕೊಳ್ಳಬೇಕಾದ ಪರಿಸ್ಥಿತಿ. ಏನಾದರೂ ಆಕಸ್ಮಿಕ, ಸಂಭವಿಸಿದರೆ ದೇವರೆ ಗತಿ. ಕಾಜಲ ದ ಅಸು ಪಾಸಿನ ಜನತೆಯ ಕೂಗು ಅರಣ್ಯ ರೋಧನ ವಾಗಿದೆ
ಇವತ್ತು ವಯೋ ವೃದ್ಧರೋರ್ವರು ಮರಣ ಹೊಂದಿದ್ದು, ಅವರ ಅಂತ್ಯಕ್ರಿಯೆ ನಡೆಸಲು ದೇಹವನ್ನು ಸರಿ ಸುಮಾರು ಒಂದು ಕಿಲೋಮೀಟರ್ ದೂರದ ತನಕ ಹೊತ್ತು ತಂದು ನಂತರ ಅಂಬ್ಯುಲೆನ್ಸ್ ಮುಖೇನ ಸ್ಮಶಾನ ಕ್ಕೆ ಸಾಗಿಸಲಾಯಿತು. ತುಂಬಿ ಹರಿಯುತ್ತಿರುವ ತೊರೆಯ ಮೇಲಿನ ಕಿಂಡಿ ಅಣೆಕಟ್ಟಿನ ಕಿರು ದಾರಿಯಲ್ಲಿ ಬಹಳ ಪ್ರಯಾಸಪಟ್ಟು ಮರಣವನ್ನು ಹೊತ್ತು ಕೊಂಡು ಬರಬೇಕಾದ ದೃಶ್ಯ ಮೂಲಭೂತ ಸೌಕರ್ಯಗಳ ಕುಂದುಕೊರತೆ ಗೆ ಜ್ವಲಂತ ಸಾಕ್ಷಿಯಾಗಿತ್ತು

Related posts

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya
error: Content is protected !!