July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.


ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು.
ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.
ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು, ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದರು.

Related posts

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!