September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.


ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು.
ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.
ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು, ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದರು.

Related posts

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya
error: Content is protected !!